ವರದಿಗಾರರು :
ದರ್ಶನ್ ಎಂ. ಎನ್. ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
03-11-2025
ಬದಿಯನಾಯಕನಹಳ್ಳಿಗೆ ಕಂದಾಯ ಗ್ರಾಮ ಹುದ್ದೆ – ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ
ದಾವಣಗೆರೆ ತಾಲ್ಲೂಕಿನ ಬದಿಯನಾಯಕನಹಳ್ಳಿಯನ್ನು ಸರ್ಕಾರ ಕಂದಾಯ ಗ್ರಾಮ ಎಂದು ಘೋಷಿಸಿತು. ಇದರ ಜೊತೆಗೆ ಸುಮಾರು 40–50 ವರ್ಷಗಳಿಂದ ವಾಸಿಸುತ್ತಿದ್ದ ಗ್ರಾಮಸ್ಥರಿಗೆ ಹಕ್ಕುಪತ್ರಗಳನ್ನು ಜಿಲ್ಲಾ ಉಸ್ತುವಾರಿ ಮತ್ತು ಗಣಿ, ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿತರಿಸಿದರು. ಗ್ರಾಮಸ್ಥರು ಸಚಿವರನ್ನು ಗೌರವಿಸಿದರು.
ಇದೇ ಸಂದರ್ಭದಲ್ಲಿ:
ತುಳಜಾಭವಾನಿ ದೇವಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಹೊಸಕಡ್ಲೇಬಾಳು ಗ್ರಾಮದ ವಾಲ್ಮೀಕಿ ನಗರದಲ್ಲಿ ನೂತನ ಬಸ್ ತಂಗುದಾಣ ಸಾರ್ವಜನಿಕರಿಗೆ ಸಮರ್ಪಿಸಲಾಯಿತು.
ಈ ಕಾರ್ಯಕ್ರಮದಲ್ಲಿ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಗಾನಹಳ್ಳಿ ಪರಶುರಾಮ, ಡಿಸಿಸಿ ಬ್ಯಾಂಕ್ ಸದಸ್ಯರು, ತಾಲ್ಲೂಕು ಪಂಚಾಯ್ತಿ ಸದಸ್ಯರು, ಗ್ರಾಮ ಪಂಚಾಯ್ತಿ ಮುಖಂಡರು, ಕಂದಾಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
