
ಲೈವ್ ಟಿವಿ ನ್ಯೂಸ್

ದಿನಾಂಕ : 09-05-2025
ಭಾರತ-ಪಾಕ್ ಉದ್ವಿಗ್ನತೆ ನಡುವೆ ಖಡಕ್ ಸೂಚನೆ ಕೊಟ್ಟ ಯಶ್!
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್
ವರದಿ ಸ್ಥಳ :ಬೆಂಗಳೂರು
ಒಟ್ಟು ಓದುಗರ ಸಂಖ್ಯೆ : 286+
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದ ಬೆನ್ನಲ್ಲೇ ಯಶ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಭಾರತ ಮತ್ತು ಪಾಕ್ ನಡುವಿನ ಯುದ್ಧ ಸನ್ನಿವೇಶ ಕುರಿತು ತಪ್ಪು ಮಾಹಿತಿ ಹಂಚಿಕೊಳ್ಳಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.
ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಮತ್ತು ಕಾರ್ಯಕ್ಕೆ ಧನ್ಯವಾದಗಳು. ಭಾರತೀಯ ಯೋಧರ ಸೇವೆಗೆ ಧನ್ಯವಾದ ತಿಳಿಸುವುದರ ಜೊತೆಗೆ ಒಗ್ಗಟ್ಟಿನಿಂದ ನಿಂತು ಜವಾಬ್ದಾರಿಯುತವಾಗಿ ವರ್ತಿಸೋಣ. ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ವಿಚಾರ ಹಂಚಿಕೊಳ್ಳುವ ಮುನ್ನ ಮೊದಲು ಪರಿಶೀಲಿಸಿ ಎಂದಿದ್ದಾರೆ. ತಪ್ಪು ಮಾಹಿತಿಯ ವಿರುದ್ಧ ನಿಲ್ಲೋಣ. ಜೈ ಹಿಂದ್ ಎಂದು ಯಶ್ ಬರೆದುಕೊಂಡಿದ್ದಾರೆ.
ಏ.22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆ ಭಾರತ ಈಗ ಪಾಕ್ಗೆ ತಕ್ಕ ಪಾಠ ಕಲಿಸುತ್ತಿದೆ.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















