ವರದಿಗಾರರು :
ದರ್ಶನ್ ಎಂ ಎನ್ ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
15-09-2025
ದಾವಣಗೆರೆ ಬಾಪೂಜಿ ಬ್ಯಾಂಕ್ ನ ಸರ್ವ ಸದಸ್ಯರ ಸಭೆ ಇಂದು ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಿತು.
ಬ್ಯಾಂಕ್ ನ ಗೌರವ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಬ್ಯಾಂಕ್ ನ ಆಡಳಿತ ಮಂಡಳಿಯ ಸದಸ್ಯರು ಮತ್ತು ಅಧಿಕಾರಿ ವರ್ಗದವರು, ಷೇರುದಾರರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಮಾತನಾಡಿದ ಅವರು ಬ್ಯಾಂಕ್ ಅಭಿವೃದ್ಧಿಗೆ ಇನ್ನಷ್ಟು ಒತ್ತು ನೀಡಬೇಕು. ಷೇರುದಾರರು ಲಾಭಾಂಶ ಗಳಿಸಲು ಸಹಕರಿಸುವಂತೆ ಹೇಳಿದರು ಈ ಸಂದರ್ಭದಲ್ಲಿ ಸಚಿವರಾದ ಶ್ರೀಯುತ ಎಸ್ ಎಸ್ ಮಲ್ಲಿಕಾರ್ಜುನ್ ರವರು ಭಾಗಿಯಾಗಿದ್ದರು .
