ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
19-10-2025
ಬೆಂಗಳೂರು: 50 ಹೊಸ ಸಂಚಾರ ಗಸ್ತು ವಾಹನಗಳನ್ನು ಪೊಲೀಸರು ಸ್ವೀಕರಿಸಿದರು
ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲಿ, ಬೆಂಗಳೂರು ನಗರ ಸಂಚಾರ ಪೊಲೀಸ್ ಮತ್ತು ಹೋಂಡಾ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ 50 ಸಂಚಾರ ಗಸ್ತು ವಾಹನಗಳನ್ನು ನಗರ ಸಂಚಾರ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಟಿಪಿ ಅಸ್ತ್ರಂ ಆ್ಯಪ್ನಲ್ಲಿ ಹೊಸ “ಇ–ಆ್ಯಕ್ಸಿಡೆಂಟ್” ಆವಿಷ್ಕಾರವನ್ನು ಬಿಡುಗಡೆ ಮಾಡಲಾಯಿತು. ಅಪಘಾತದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು ಮತ್ತು ವಿಮೆ ಪಡೆಯಲು ಸರಳಗೊಳಿಸಲು ಈ ಆವಿಷ್ಕಾರ ಪರಿಚಯಿಸಲಾಗಿದೆ. ಈ ಆ್ಯಪ್ ಮೂಲಕ ರಿಪೋರ್ಟ್ ಮಾಡಿದರೆ ವಿಮೆ ಪಡೆಯುವುದು ಸುಲಭವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ. ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ, ಮತ್ತು ಹೋಂಡಾ ಇಂಡಿಯಾ ಮುಖ್ಯಸ್ಥರು ಸುನೀಲ್ ಕುಮಾರ್ ಮಿತ್ತಲ್, ಪ್ರಭು ನಾಗರಾಜ್ ಉಪಸ್ಥಿತರಿದ್ದರು.
