ಲೈವ್ ಟಿವಿ ನ್ಯೂಸ್

ದಿನಾಂಕ : 07-08-2025

*ಪಡಿತರ ಆಹಾರ ವಿತರಣೆ: ಯಾದಗಿರಿ ಜಿಲ್ಲೆಯಲ್ಲಿ ಆಗಸ್ಟ್ 2025 ರ ಪಡಿತರ ಬಿಡುಗಡೆಗೆ*

ವರದಿಗಾರರು : ರಾಜಶೇಖರ ಮಾಲಿ ಪಾಟೀಲ್
ವರದಿ ಸ್ಥಳ :ಶಹಾಪುರ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 43+

*ಯಾದಗಿರಿ, ಆಗಸ್ಟ್ 06* ಜಿಲ್ಲೆಯಲ್ಲಿ ಆಗಸ್ಟ್ 2025 ರ ಮಾಹೆಗೆ ಪಡಿತರ ಆಹಾರ ಧಾನ್ಯಗಳ ವಿತರಣೆಯನ್ನು ಪ್ರಕಟಿಸಲಾಗಿದೆ. ಈ ಕುರಿತು ಯಾದಗಿರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಅನೀಲ ಕುಮಾರ ಡವಳಗಿ ಅವರು ಮಾಹಿತಿ ನೀಡಿದ್ದಾರೆ.

*ಪ್ರಮುಖ ಅಂಶಗಳು*

*ಅಂತ್ಯೋದಯ (AAY) ಪಡಿತರ ಚೀಟಿಗೆ*: ಒಂದು ಪಡಿತರ ಚೀಟಿಗೆ 14 ಕೆ.ಜಿ ಅಕ್ಕಿ ಮತ್ತು 21 ಕೆ.ಜಿ ಜೋಳ ವಿತರಿಸಲಾಗುವುದು. ಜೊತೆಗೆ, ಅನ್ನಭಾಗ್ಯ ಯೋಜನೆಯಡಿಯಲ್ಲಿ ಹೆಚ್ಚುವರಿ 5 ಕೆ.ಜಿ ಅಕ್ಕಿ ವಿತರಿಸಲಾಗುತ್ತದೆ.

*ಪಿ.ಹೆಚ್.ಹೆಚ್ (BPL) ಪಡಿತರ ಚೀಟಿಗೆ*: ಪ್ರತಿ ಫಲಾನುಭವಿಗೆ 2 ಕೆ.ಜಿ ಅಕ್ಕಿ ಮತ್ತು 3 ಕೆ.ಜಿ ಜೋಳ ವಿತರಿಸಲಾಗುವುದು. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ ಉಚಿತ ಅಕ್ಕಿ ನೀಡಲಾಗುತ್ತದೆ.

*ರಾಜ್ಯ ವ್ಯಾಪ್ತಿಯ ಪಡಿತರ ಚೀಟಿಗೆ*: 5 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ವಿತರಣೆ. ರಾಜ್ಯ ಸರ್ಕಾರದ ಆದೇಶ ಮೇರೆಗೆ, ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿರುವ ಅಂತ್ಯೋದಯ ಮತ್ತು ಪಿ.ಹೆಚ್.ಹೆಚ್ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

*ಗಮನ ಹರೀಸಬೇಕಾದ ಸಂಗತಿಗಳು*: ಒಂದು ರಾಷ್ಟ್ರ ಒಂದು ಪಡಿತರ ಚೀಟಿ: ಅಂತರ-ರಾಜ್ಯ ಮತ್ತು ಅಂತರ-ಜಿಲ್ಲಾ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ, ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶವಿದೆ.

*ದೂರುಗಳಿಗೆ ಸಂಪರ್ಕಿಸಿ*: ಪಡಿತರ ಕಡಿಮೆ ನೀಡಿದರೆ, ಹಣ ಕೇಳಿದರೆ ಅಥವಾ ಯಾವುದೇ ಇತರ ದೂರುಗಳಿದ್ದಲ್ಲಿ, ಉಚಿತ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಬಹುದು. ಅಥವಾ ತಾಲೂಕ ದಂಡಾಧಿಕಾರಿಗಳ ಕಚೇರಿ ಮತ್ತು ಜಿಲ್ಲೆಯ ಉಪನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು.

ನಿಯಮ ಉಲ್ಲಂಘಿಸಿದರೆ ದಂಡ*: ಪಡಿತರ ಆಹಾರ ಧಾನ್ಯಗಳನ್ನು ಮಾರಾಟ ಮಾಡುವುದು ಅಥವಾ ಸಂಗ್ರಹಿಸುವುದು ಕಂಡುಬಂದಲ್ಲಿ, ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಿ, ಆರು ತಿಂಗಳ ಅವಧಿಗೆ ಪಡಿತರಚೀಟಿಯನ್ನು ಅಮಾನತು ಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand