ದೇಶದ ಮೊದಲ ವರ್ಟಿಕಲ್ ಪಂಬನ್ ರೈಲ್ವೆ ಬ್ರಿಡ್ಜ್ – ಇದರ ವಿಶೇಷತೆಯೇನು?

ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ || ಸ್ಥಳ : ಬೆಂಗಳೂರು
ವರದಿ ದಿನಾಂಕ : 03-04-2025

ದೇಶದ ಮೊದಲ ವರ್ಟಿಕಲ್ ಪಂಬನ್ ರೈಲ್ವೆ ಬ್ರಿಡ್ಜ್ – ಇದರ ವಿಶೇಷತೆಯೇನು?

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆಗೆ ಸಜ್ಜಾಗಿದೆ. ರಾಮೇಶ್ವರಂಗೆ ತೆರಳುವ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಪಂಬನ್ ಬ್ರಿಡ್ಜ್‌ (Pamban Bridge) ಅನ್ನು ನಿರ್ಮಿಸಲಾಗಿದೆ. ಸಮುದ್ರದಲ್ಲಿ ನಿರ್ಮಿಸಲಾದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇದಾಗಿದ್ದು, ಈ ಸೇತುವೆಯನ್ನು ರಾಮನವಮಿಯಂದು ಪ್ರಧಾನಿ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ.

ಪಂಬನ್ ರೈಲು ಸೇತುವೆಯ ನಿರ್ಮಾಣದ ಕಾರ್ಯವನ್ನು 1870ರಲ್ಲಿ ಬ್ರಿಟಿಷ್ ಸರ್ಕಾರವು ಶ್ರೀಲಂಕಾಕ್ಕೆ ವ್ಯಾಪಾರ ಸಂಪರ್ಕವನ್ನು ವಿಸ್ತರಿಸಲು ನಿರ್ಧರಿಸಿದಾಗ ಪ್ರಾರಂಭಿಸಲಾಯಿತು. ಸುಮಾರು 2.2 ಕಿ.ಮೀ.ಗಳಷ್ಟು ವಿಸ್ತಾರವಿದ್ದ, 143 ಪಿಯರ್‌ಗಳನ್ನು ಹೊಂದಿರುವ ಇದನ್ನು 1914ರಲ್ಲಿ ಅಧಿಕೃತವಾಗಿ ಕಾರ್ಯರೂಪಕ್ಕೆ ತರಲಾಯಿತು.

ಪಂಬನ್ ರೈಲು ಸೇತುವೆಯು ಶೆರ್ಜರ್ ರೋಲಿಂಗ್ ಲಿಫ್ಟ್ ತಂತ್ರಜ್ಞಾನದ ಮೂಲಕ ಕಾರ್ಯನಿರ್ವಹಿಸುತ್ತದೆ. ಇದು ದೋಣಿ ಅಥವಾ ಹಡಗು ಚಲಿಸುವಾಗ 90 ಡಿಗ್ರಿ ಕೋನದಲ್ಲಿ ಮೇಲಕ್ಕೆ ತೆರೆಯುತ್ತದೆ. ಸಮುದ್ರದ ಮೇಲೆ ನಿರ್ಮಿಸಲಾದ ಭಾರತದ ಅತಿ ಉದ್ದದ ಸೇತುವೆಯಾಗಿದೆ. ಪಂಬನ್ ರೈಲ್ವೆ ಸೇತುವೆಯು 1988ರವರೆಗೆ ರಾಮೇಶ್ವರಂ ಮತ್ತು ಮುಖ್ಯ ಭೂಭಾಗದ ನಡುವಿನ ಏಕೈಕ ಸಂಪರ್ಕವಾಗಿತ್ತು. ನಂತರ ಅದಕ್ಕೆ ಸಮಾನಾಂತರವಾಗಿ ರಸ್ತೆ ಸೇತುವೆಯನ್ನು ನಿರ್ಮಿಸಲಾಯಿತು.

78 ಮೀಟರ್ ಉದ್ದ ಮತ್ತು 380 ಟನ್ ತೂಕದ ಸೇತುವೆಯ ಒಂದು ಭಾಗವು ಹಡಗು ಸಂಚಾರಕ್ಕಾಗಿ 17 ಮೀಟರ್ ಎತ್ತರಕ್ಕೆ ಹೋಗುತ್ತದೆ. ತಮಿಳುನಾಡಿನ ಮಂಟಪಂದಿಂದ ರಾಮೇಶ್ವರಂ ದ್ವೀಪವನ್ನು ಸಂಪರ್ಕಿಸಲು ಆಧುನಿಕ ತಂತ್ರಜ್ಞಾನದ ಸಹಾಯದಿಂದ ಈ ಸೇತುವೆಯನ್ನು ನಿರ್ಮಿಸಲಾಗಿದೆ. 111 ವರ್ಷಗಳ ಹಿಂದೆ ಇಲ್ಲಿ ನಿರ್ಮಿಸಿದ್ದ ಹಳೆಯ ಸೇತುವೆ ಶಿಥಿಲಗೊಂಡಿದ್ದರಿಂದ ಅದರ ಪಕ್ಕದಲ್ಲಿಯೇ ಈ ಹೊಸ ಸೇತುವೆಯನ್ನು ನಿರ್ಮಿಸಲಾಗಿದೆ. ಈ ಸೇತುವೆಯಲ್ಲಿ ಟ್ರ್ಯಾಕ್ ಡಬ್ಲಿಂಗ್ ಹಾಗೂ ವಿದ್ಯುತ್ ಕಾಮಗಾರಿ ಕೂಡ ಮಾಡಲಾಗಿದೆ. ರೈಲ್ವೆ ಟ್ರ್ಯಾಕ್ ಸೇರಿದಂತೆ ಈ ಸೇತುವೆಯ ತೂಕ 660 ಮೆಟ್ರಿಕ್ ಟನ್ ಇದೆ.

ಸಮುದ್ರದಲ್ಲಿ ಸೇತುವೆ ನಿರ್ಮಾಣಕ್ಕೆ ಮರಳು ಹಾಗೂ ಉಪ್ಪು‌ನೀರು ಸವಾಲಾಗಿರುತ್ತದೆ. ಇದರಿಂದ ಬೇಗ ತುಕ್ಕು ಸಹ ಹಿಡಿಯುತ್ತದೆ. ಇದನ್ನು ತಡೆಗಟ್ಟಲು ಸಾಕಷ್ಟು ತಾಂತ್ರಿಕತೆ ಬಳಸಿಕೊಳ್ಳಲಾಗಿದೆ. ಹಳೇ ಬ್ರಿಡ್ಜ್ 1914ರಿಂದ 2021ರವರೆಗೆ ಕಾರ್ಯನಿರ್ವಹಿಸಿದೆ. ಈ ಬಾರಿಯ ನೂತನ ಪಂಬನ್ ಬ್ರಿಡ್ಜ್ ತುಕ್ಕು ಹಿಡಿಯಬಾರದು ಎಂಬ ಕಾರಣಕ್ಕೆ ನಿರಂತರವಾಗಿ ಡಬಲ್ ಕೋಟ್ ಪೇಯಿಂಟ್ ಹಾಕಲಾಗಿದೆ. ಇದು ತುಕ್ಕು ರಹಿತ ಪೇಯಿಂಟ್ ಆಗಿದೆ.

ಹಳೇ ಬ್ರಿಡ್ಜ್‌ ಮಾನವ ಸಹಿತವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಈ ನೂತನ ಬ್ರಿಡ್ಜ್‌ ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತದೆ. ಇದು ಎಲೆಕ್ಟ್ರಿಕಲ್ ಆಟೋ‌ಮೆಕ್ಯಾನಿಕಲ್ ತಂತ್ರಜ್ಞಾನ ಒಳಗೊಂಡಿದೆ. ಹಳೇ ಬ್ರಿಡ್ಜ್ ತೆರೆದುಕೊಳ್ಳಲು 45 ನಿಮಿಷ ಕಾಲಾವಕಾಶ ತೆಗೆದುಕೊಳ್ಳುತ್ತಿತ್ತು. ಆದರೆ ಹೊಸ ಬ್ರಿಡ್ಜ್ 5.3 ನಿಮಿಷದಲ್ಲಿ ತೆರೆದುಕೊಳ್ಳಲಿದೆ. ಒಂದು ಬಾರಿ ಈ ಸೇತುವೆಯನ್ನು ಮೇಲೆ ಎತ್ತಲು 120 ಕಿಲೋ ವ್ಯಾಟ್ ವಿದ್ಯುತ್ ಬೇಕಾಗುತ್ತದೆ.

ಇದರ ವಿಶೇಷತೆಯೇನು? : * 2.5 ಕಿ.ಮೀ ಉದ್ದದ ದೇಶದ ಮೊದಲ ವರ್ಟಿಕಲ್‌ ಲಿಫ್ಟ್‌ ರೈಲು ಸೇತುವೆ * ಇದು ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತದೆ * ಹಡಗು ಸಂಚಾರ ವೇಳೆ ಮೇಲಕ್ಕೆತ್ತಲ್ಪಟ್ಟು ಮತ್ತೆ ಅದೇ ಸ್ಥಾನಕ್ಕೆ ಮರಳುತ್ತದೆ * ಆರ್ಥಿಕತೆ, ಪ್ರವಾಸೋದ್ಯಮ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲ * ಮುಖ್ಯಭೂಮಿಯಿಂದ ರಾಮೇಶ್ವರಂಗೆ 5 ನಿಮಿಷದ ಪ್ರಯಾಣ * 535 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸೇತುವೆ * ಸೇತುವೆಯಲ್ಲಿ ಚಲಿಸುವ ರೈಲಿನ ವೇಗದ ಮಿತಿ ಗಂಟೆಗೆ 75 ಕಿ.ಮೀ * ಶೆರ್ಜರ್ ರೋಲಿಂಗ್ ಲಿಫ್ಟ್ ತಂತ್ರಜ್ಞಾನದ ಬಳಕೆ * ತುಕ್ಕು ಹಿಡಿಯದಂತೆ ತುಕ್ಕು ರಹಿತ ಡಬಲ್ ಕೋರ್ಟ್ ಪೇಯಿಂಟ್ ಬಳಕೆ * ಸೇತುವೆಯನ್ನು ಮೇಲೆ ಎತ್ತಲು 120 ಕಿಲೋ ವ್ಯಾಟ್ ವಿದ್ಯುತ್

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ಅವರು ಪಂಬನ್ ರೈಲು ಸೇತುವೆಯ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ವೇಗದ ರೈಲುಗಳು ಮತ್ತು ಹೆಚ್ಚಿದ ಜನದಟ್ಟಣೆಯನ್ನು ನಿರ್ವಹಿಸುವಂತೆ ಈ ಸೇತುವೆಯ ನಿರ್ಮಾಣ ಮಾಡಲಾಗಿದೆ. ಹೊಸ ಪಂಬನ್ ಸೇತುವೆ ಕೇವಲ ಕ್ರಿಯಾತ್ಮಕವಾಗಿಲ್ಲ. ಇದು ಪ್ರಗತಿಯ ಸಂಕೇತವಾಗಿದ್ದು, ಈ ಸೇತುವೆ ನಿರ್ಮಾಣಕ್ಕೆ ಆಧುನಿಕ ತಂತ್ರಜ್ಞಾನಗಳನ್ನು ಬಳಸಲಾಗಿದೆ. ಇಂಜಿನಿಯರ್ ಗಳ ಕೈಚಳಕವು ಇಡೀ ಭಾರತ ಹುಬ್ಬೇರಿಸುವಂತೆ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

ಭಾರತದ ಮೊದಲ ಲಂಬ ಲಿಫ್ಟ್ ಪಂಬನ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 6 ರಾಮ ನವಮಿಯಂದು ಉದ್ಘಾಟಿಸಲಿದ್ದಾರೆ.

ವಿವ ಟೆಕ್ ಕಚೇರಿಯಲ್ಲಿ ಕ್ರಿಸ್ಮಸ್ ಸಡಗರ

ಒಟ್ಟು ಓದುಗರ ಸಂಖ್ಯೆ : 1273+

ಬೀದರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೀರ ಬಾಲ ದಿವಸ ಆಚರಣೆ

ಒಟ್ಟು ಓದುಗರ ಸಂಖ್ಯೆ : 1357+

ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.

ಒಟ್ಟು ಓದುಗರ ಸಂಖ್ಯೆ : 1816+

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಎರಕಟ್ಟೆ ಬಳಿ ಗಂಡಾನೆ ಸಾವು

ಒಟ್ಟು ಓದುಗರ ಸಂಖ್ಯೆ : 1827+

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ಒಟ್ಟು ಓದುಗರ ಸಂಖ್ಯೆ : 1915+

ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ

ಒಟ್ಟು ಓದುಗರ ಸಂಖ್ಯೆ : 1943+

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಒಟ್ಟು ಓದುಗರ ಸಂಖ್ಯೆ : 2043+

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ

ಒಟ್ಟು ಓದುಗರ ಸಂಖ್ಯೆ : 1949+

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಒಟ್ಟು ಓದುಗರ ಸಂಖ್ಯೆ : 1961+

ಅದ್ದೂರಿಯಾಗಿ ನಡೆದ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ

ಒಟ್ಟು ಓದುಗರ ಸಂಖ್ಯೆ : 2006+

ಮನುಸ್ಮೃತಿ ದಹನ ದಿನ

ಒಟ್ಟು ಓದುಗರ ಸಂಖ್ಯೆ : 1971+

ಹಿಟ್ ಅಂಡ್ ರನ್ ಅಪಘಾತದಲ್ಲಿ ಮರಣ ಹೊಂದಿದ ರಾಜನಾಯಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲಕ್ಷ ಪರಿಹಾರ

ಒಟ್ಟು ಓದುಗರ ಸಂಖ್ಯೆ : 4639+

ಚಿಕ್ಕತುಷ್ಟೂರಿನಲ್ಲಿ 13.5 ಎಕರೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ

ಒಟ್ಟು ಓದುಗರ ಸಂಖ್ಯೆ : 4622+

ಯೇಸು ಕ್ರಿಸ್ತನ ಹುಟ್ಟುಹಬ್ಬ (ಕ್ರಿಸ್‌ಮಸ್) ಕುರಿತು ಲೇಖನ

ಒಟ್ಟು ಓದುಗರ ಸಂಖ್ಯೆ : 4836+

ಅಟಲ್ ಎಂಬ ಅಜಾತಶತ್ರು.

ಒಟ್ಟು ಓದುಗರ ಸಂಖ್ಯೆ : 4846+

ಶಾಂತಿದೂತ ಏಸುಕ್ರಿಸ್ತನ ಜನುಮದಿನ

ಒಟ್ಟು ಓದುಗರ ಸಂಖ್ಯೆ : 5040+

ಮಾರ್ಕ್ - 45 ??? ಅಸಲಿ ಕಹಾನಿ

ಒಟ್ಟು ಓದುಗರ ಸಂಖ್ಯೆ : 5085+

ಕಾಂಗ್ರೆಸ್ ಸರ್ಕಾರದ ದ್ವೇಷಭಾಷಣ ಅಪರಾಧಗಳ ಮಸೂದೆ ಕೂಡಲೇ ವಾಪಸ್ ಪಡೆಯುಂತೆ  ಬಿಜೆಪಿ ಪ್ರತಿಭಟನೆ

ಒಟ್ಟು ಓದುಗರ ಸಂಖ್ಯೆ : 7341+

ದಾವಣಗೆರೆ ಜಿಲ್ಲೆಯ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳಿದೆಯೇ? ಅವಘಡ ತಪ್ಪಿಸಲು ತಕ್ಷಣ ಪರಿಶೀಲನೆ ಅಗತ್ಯ

ಒಟ್ಟು ಓದುಗರ ಸಂಖ್ಯೆ : 7434+

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶಾಶ್ವತ ಯೌಗಿಕ ಹಾಗೂ ನೈಸರ್ಗಿಕ ಕೃಷಿ ಕುರಿತು ಕಾರ್ಯಗಾರ

ಒಟ್ಟು ಓದುಗರ ಸಂಖ್ಯೆ : 7459+

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ಒಟ್ಟು ಓದುಗರ ಸಂಖ್ಯೆ : 7462+

ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣ

ಒಟ್ಟು ಓದುಗರ ಸಂಖ್ಯೆ : 7471+

ದಾವಣಗೆರೆ ಆನಗೋಡು ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಒಟ್ಟು ಓದುಗರ ಸಂಖ್ಯೆ : 7480+

ನ್ಯೂ ಇಯರ್ ಭದ್ರತೆಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ

ಒಟ್ಟು ಓದುಗರ ಸಂಖ್ಯೆ : 7755+

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಒಟ್ಟು ಓದುಗರ ಸಂಖ್ಯೆ : 7764+

ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..

ಒಟ್ಟು ಓದುಗರ ಸಂಖ್ಯೆ : 10123+

ಚಿರತೆಗಿಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ, 3 ತಾಸು ಬೋನಿನಲ್ಲೇ ಚೀರಾಟ !

ಒಟ್ಟು ಓದುಗರ ಸಂಖ್ಯೆ : 10295+

ಡಿಸೆಂಬರ್ 29 ರಂದು ಬೊಮ್ಮಗೊಂಡೇಶ್ವರ ದೇವಸ್ಥಾನ ಭೂಮಿ ಪೂಜೆ

ಒಟ್ಟು ಓದುಗರ ಸಂಖ್ಯೆ : 10308+

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಒಟ್ಟು ಓದುಗರ ಸಂಖ್ಯೆ : 10636+

2025 ವರ್ಷಕ್ಕೆ ಗುಡ್ ಬೈ ಹೇಳಲು ದಿನಗಣನೆ ಸಂಭ್ರಮ ಮತ್ತು ಸುರಕ್ಷತಾ ಕ್ರಮ

ಒಟ್ಟು ಓದುಗರ ಸಂಖ್ಯೆ : 10798+

ಬುದ್ಧಿಶಕ್ತಿ, ವಿವೇಕ ಮತ್ತು ಜ್ಞಾನದಿಂದಲೇ ಹಕ್ಕು–ಸೌಲಭ್ಯಗಳ ಸಾಧನೆ: ಜಿ.ಬಿ. ವಿನಯ್ ಕುಮಾರ್

ಒಟ್ಟು ಓದುಗರ ಸಂಖ್ಯೆ : 10862+

ನಲ್ಲೂರು ಜ್ಯುಯಲರ್ಸ್ ಕುಟುಂಬದಿಂದ ಕೊಡುಗೆ.

ಒಟ್ಟು ಓದುಗರ ಸಂಖ್ಯೆ : 10886+

ಹುಣಸೂರು ನಗರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಒಟ್ಟು ಓದುಗರ ಸಂಖ್ಯೆ : 10948+

ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ್ತು ದೇವನಹಳ್ಳಿ ಮಂಡಲ ಪದಾಧಿಕಾರಿಗಳ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 10931+

ರಾಷ್ಟ್ರೀಯ ರೈತರ ದಿನ

ಒಟ್ಟು ಓದುಗರ ಸಂಖ್ಯೆ : 10921+

ತಹಸೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಶಾಸಕರ ಗ್ರಾಮ ಸಂಚಾರದಿಂದ ವಿನಾಯ್ತಿ ನೀಡುವಂತೆ ಮನವಿ

ಒಟ್ಟು ಓದುಗರ ಸಂಖ್ಯೆ : 12925+

ಇಸ್ರೋ ಜಾಗತಿಕ ಬ್ರಾಡ್‌ಬ್ಯಾಂಡ್ ಉಪಗ್ರಹ ಉಡಾವಣೆ

ಒಟ್ಟು ಓದುಗರ ಸಂಖ್ಯೆ : 13378+

ಹೆಣ್ಣುಮಕ್ಕಳು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಡಾ. ವಿಶಾಲಾಕ್ಷಿ ವಿ. ಕರಡ್ಡಿ

ಒಟ್ಟು ಓದುಗರ ಸಂಖ್ಯೆ : 13413+

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಒಟ್ಟು ಓದುಗರ ಸಂಖ್ಯೆ : 13404+

ರಾಷ್ಟ್ರೀಯ ಗಣಿತ ದಿನ

ಒಟ್ಟು ಓದುಗರ ಸಂಖ್ಯೆ : 13657+

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್: ಕೋಲಾರದ ಜಗದೀಶ್ ಕೆ.ಸಿ.ಗೆ ಚಿನ್ನ–ಕಂಚು

ಒಟ್ಟು ಓದುಗರ ಸಂಖ್ಯೆ : 13759+

ಮುಕ್ತಿ ಕಾಲೋನಿಯ ಬಾಳೆ ತೋಟದಲ್ಲಿ ನಿತ್ರಾಣವಾಗಿದ್ದ ಹುಲಿ ಸೆರೆ

ಒಟ್ಟು ಓದುಗರ ಸಂಖ್ಯೆ : 13775+

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 13765+

ಬಿಸಿ ನೀರಿಗೆ ಬಿದ್ದು ಎರಡು ವರ್ಷದ ಹೆಣ್ಣು ಮಗು ಸಾವು

ಒಟ್ಟು ಓದುಗರ ಸಂಖ್ಯೆ : 13793+

ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟ

ಒಟ್ಟು ಓದುಗರ ಸಂಖ್ಯೆ : 18665+

ಜೈ ಹನುಮಾನ್

ಒಟ್ಟು ಓದುಗರ ಸಂಖ್ಯೆ : 18940+

ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ.ಪರಮೇಶ್ವ ಪಾಟೀಲ್ ತಡಪಳ್ಳ

ಒಟ್ಟು ಓದುಗರ ಸಂಖ್ಯೆ : 19010+

ಕೊರಟಗೆರೆಯಲ್ಲಿ ತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ

ಒಟ್ಟು ಓದುಗರ ಸಂಖ್ಯೆ : 19108+