ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ನುಡಿ ಹಬ್ಬದ ಆಚರಣೆ
ವರದಿಗಾರರು : ಬಸವರಾಜ್ | ಸ್ಥಳ : ಹಾಸನ | ದಿನಾಂಕ : 28-11-2025

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ನುಡಿ ಹಬ್ಬದ ಆಚರಣೆ

ಅರಸೀಕೆರೆ ನಗರದ ಹೊರವಲಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಬರಹಗಾರರ ಸಂಘ, ತಾಲ್ಲೂಕು ಘಟಕ, ಅವರ ಸಹಯೋಗದಲ್ಲಿ ಕನ್ನಡ ನುಡಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಎಸ್. ನಾರಾಯಣ್ ಅವರು, “ಕನ್ನಡ ಶ್ರೇಷ್ಠ ಭಾಷೆ. ಈ ನಾಡಿನಲ್ಲಿ ಹುಟ್ಟಿದ ನಾವೇ ಧನ್ಯರು. ನಮ್ಮ ಕಾಲೇಜಿನಲ್ಲಿ ಪ್ರತಿವರ್ಷ ಕನ್ನಡ ನಾಡು ನುಡಿಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಕನ್ನಡವೆಂದರೆ ಅದು ಭಾಷೆಯಷ್ಟೇ ಅಲ್ಲ, ಸಂಸ್ಕೃತಿ, ಜೀವನ ಶೈಲಿ,” ಎಂದು ಉಲ್ಲೇಖಿಸಿದರು.

ಬರಹಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಡಾ. ಬಸವರಾಜು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅವರು “ಕನ್ನಡ ಉಳಿಸಲು ಹೋರಾಡಬೇಕಿಲ್ಲ; ಕನ್ನಡಿಗರಾಗಿರುವ ನಾವು ಪ್ರಭಾವಶಾಲಿಯಾಗಿ ಕನ್ನಡವನ್ನು ಬಳಸಬೇಕು. ಆಗ ಮಾತ್ರ ಕನ್ನಡ ಬೆಳೆಯಲು ಸಾಧ್ಯ. ಇಂಗ್ಲಿಷ್ ವ್ಯಾಮೋಹವು ಕನ್ನಡಕ್ಕೆ ಹಾನಿಯಾಗದಂತೆ ನೋಡಿಕೊಳ್ಳಬೇಕು. ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿವೆ; ಪರಿಶ್ರಮದಿಂದ ಪ್ರಯತ್ನಿಸಿ,” ಎಂದು ಕರೆ ನೀಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಕುಮಾರ್ ಅವರು, “ನ್ಯಾಯಾಂಗ, ಬ್ಯಾಂಕಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಬಳಸಿದಾಗ, ಕನ್ನಡ ಭಾಷೆ ಮತ್ತಷ್ಟು ಬೆಳೆಯಬಹುದು,” ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲ್ಲೂಕು ಅಧ್ಯಕ್ಷ ಕಿರಣ್ ಕುಮಾರ್ “ಕನ್ನಡ ನೆಲ, ಜಲ, ಸಂಸ್ಕೃತಿ ಕುಸಿತಕ್ಕೀಡಾಗದಂತೆ ನೋಡಬೇಕು. ಕನ್ನಡ ಶಾಲೆಗಳು, ಕಾಲೇಜುಗಳಿಗೆ ಹೆಚ್ಚಿನ ಸೌಲಭ್ಯಗಳು ಸಿಗಬೇಕು. ನಾವೆಲ್ಲರೂ ಕನ್ನಡ ಸಂಸ್ಕೃತಿ ಉಳಿಸುತ್ತಾ ಸ್ವಾಭಿಮಾನದಿಂದ ಬದುಕೋಣ,” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯ ಭಾಷಣಕಾರರಾಗಿ ಕೆ.ಸಿ. ನಟರಾಜ್ ಅವರು ಕನ್ನಡ ನಾಡು ನುಡಿಯ ಪ್ರಾಚೀನತೆ ಕುರಿತು ವಿವರಿಸಿದರು. ಪಂಪ, ರನ್ನ, ಕುಮಾರವ್ಯಾಸ, ಶರಣರು, ದಾಸ ಸಾಹಿತ್ಯದ ವಿಶೇಷತೆಯನ್ನು ಆಸಕ್ತಿದಾಯಕವಾಗಿ ವಿವರಿಸಿದರು. ಕಾಲೇಜಿ ಅಭಿವೃದ್ಧಿ ಸಮಿತಿಯ ಸದಸ್ಯ ಚಂದ್ರೇಗೌಡರು ಕನ್ನಡ ಜಾನಪದ ಸಾಹಿತ್ಯದ ಮಹತ್ವವನ್ನು ಹಂಚಿಕೊಂಡು, ತಮ್ಮ ಶಿಷ್ಯ ಬಳಗ “ಚಿಕ್ಕೂರು ಕಲಾತಂಡ” ಜೊತೆ ಕೋಲಾಟ ಪ್ರದರ್ಶನ ನಡೆಸಿದರು. ಶಿಕ್ಷಕರು ಮತ್ತು ಹಾಡುಗಾರರಾದ ಪಾಜಿಲ್ ಅಹಮದ್ ಖಾನ್ ಕನ್ನಡ ನುಡಿ ಪ್ರತಿಬಿಂಬಿಸುವ ಹಾಡುಗಳನ್ನು ಹಾಡಿ ಕಾರ್ಯಕ್ರಮವನ್ನು ರಂಜಿಸಿದರು.

ಕಾಲೇಜಿನ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ಧರಿಸಿ ಸಡಗರದಿಂದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಡಾ. ಹರೀಶ್ ಕುಮಾರ್ ಎಲ್ಲರನ್ನು ಸ್ವಾಗತಿಸಿ, ಉಪನ್ಯಾಸಕ ರವಿ ಎಲ್ಲರನ್ನು ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ನಿರೂಪಕರು ಕಲಾವತಿ ಮತ್ತು ಚಂದ್ರ ಶೇಖರ ನಿರೂಪಿಸಿದರು. ಪ್ರೊ. ಶಿವಕುಮಾರ್, ಚಿತ್ರಕಲಾ ಉಪನ್ಯಾಸಕರಾದ ಹರೀಶ್ ರಾಘವೇಂದ್ರ, ಡಾ. ಸುನೀಲ್, ಡಾ. ರಾಜೇಶ್ ಖನ್ನಾ, ಮಲ್ಲಿಕಾರ್ಜುನ, ಪ್ರಕಾಶ್, ಪಿಂಟು, ರತ್ನಮ್ಮ, ಗಂಗಾ, ವೀಣಾ, ಪ್ರತಿಭಾ, ಮೋಹನ್ ಸೇರಿದಂತೆ ಎಲ್ಲಾ ಉಪನ್ಯಾಸಕರು ಭಾಗವಹಿಸಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 65747+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 65769+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 65770+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 65797+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 65963+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 66031+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 66150+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 66334+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 66279+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 66446+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 66450+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 66467+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 66465+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 66490+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 66511+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 67970+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 68055+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 68379+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 68388+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 68815+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 68798+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 73751+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 73736+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 73744+