ವರದಿಗಾರರು :
ಮುತ್ತುರಾಜ್ ||
ಸ್ಥಳ :
ಕೊರಟಗೆರೆ
ವರದಿ ದಿನಾಂಕ :
26-12-2025
ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.
ಲೋಕ ಕಲ್ಯಾಣಕ್ಕಾಗಿ 100 ಕ್ಕೂ ಹೆಚ್ಚು ಯಾತ್ರಾರ್ಥಿಗಳ ಸಂಕಲ್ಪ ಯಾತ್ರೆ.
ಲೋಕ ಕಲ್ಯಾಣಕ್ಕಾಗಿ 100 ಕ್ಕೂ ಹೆಚ್ಚು ಯಾತ್ರಾರ್ಥಿಗಳ ಸಂಕಲ್ಪ ಯಾತ್ರೆ.
ದೇವರ ದರ್ಶನ ಎಂದರೆ ಕಾಲುನಡಿಗೆಯಲ್ಲೇ ಆಗಬೇಕು ಎಂಬ ದೃಢ ನಂಬಿಕೆ, ಶ್ರಮ–ಭಕ್ತಿ–ಸಂಕಲ್ಪದೊಂದಿಗೆ ರಾಮನಗರ ಜಿಲ್ಲೆಯ ಮಾಗಡಿಯಿಂದ ಮಂತ್ರಾಲಯದವರೆಗೆ ಕಾಲುನಡಿಗೆಯಲ್ಲಿ ಸಾಗುತ್ತಿರುವ ಶ್ರೀ ಗುರುರಾಜ ಪಾದಯಾತ್ರೆ ಸೇವಾ ಸಮಿತಿಯ ಯಾತ್ರೆ ಇಡೀ ರಾಜ್ಯದ ಗಮನ ಸೆಳೆದಿದೆ.
ಲೋಕ ಕಲ್ಯಾಣಾರ್ಥವಾಗಿ ಕಳೆದ 14 ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆಗಳನ್ನು ಆಯೋಜಿಸುತ್ತಿರುವ ಈ ಸಮಿತಿ ಭಕ್ತರ ಮೆಚ್ಚುಗೆಗೆ ಪಾತ್ರವಾಗಿದೆ. ಆರ್ಥಿಕ ಸ್ಥಿತಿ, ಆರೋಗ್ಯ ಸಮಸ್ಯೆ, ಊಟ–ವಾಸ್ತವ್ಯದ ಚಿಂತೆಗಳ ಕಾರಣದಿಂದ ಯಾತ್ರೆ ಕೈಗೊಳ್ಳಲಾಗದವರನ್ನೂ ಒಳಗೊಂಡು, ಪೂರ್ವನಿಯೋಜಿತ ಚಲಿಸುವ ನಕ್ಷೆ, ತಂಗುವ ಸ್ಥಳಗಳ ವ್ಯವಸ್ಥೆಯೊಂದಿಗೆ ಪಾದಯಾತ್ರೆಯನ್ನು ಯಶಸ್ವಿಯಾಗಿ ಸಂಘಟಿಸುವುದು ಈ ಸಮಿತಿಯ ವಿಶೇಷತೆ.
ಹಿರಿಯ ಮುತ್ಸದ್ದಿ ಸದಾಶಿವ ಶೆಟ್ಟರ್ ಅವರ ಮಾರ್ಗದರ್ಶನದಲ್ಲಿ, ಸಮಿತಿಯ ಗೌರವಾಧ್ಯಕ್ಷ ಸೀಬಣ್ಣಾಚಾರ್, ಅಧ್ಯಕ್ಷ ಗುರುಸಿದ್ದಪ್ಪ ನೇತೃತ್ವದಲ್ಲಿ ಈಗಾಗಲೇ ಕಾಶಿ, ತಿರುಪತಿ, ಧರ್ಮಸ್ಥಳ, ಮಲೆ ಮಹದೇಶ್ವರ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಿಗೆ ಕಾಲುನಡಿಗೆಯಲ್ಲಿ ಪಾದಯಾತ್ರೆ ಪೂರ್ಣಗೊಳಿಸಲಾಗಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯಾತ್ರೆಗಳನ್ನು ಕೈಗೊಳ್ಳುವ ಉದ್ದೇಶವನ್ನು ಸಮಿತಿ ಹೊಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವಿಜಯಪುರದ ವಿಶ್ವ ವಿಜೇತ ಸ್ವಾಮಿ ವಿವೇಕಾನಂದ ಯುವ ಬಳಗದವರಿಂದ ರಾಯರ ಭಜನಾ ಕಾರ್ಯಕ್ರಮ ನಡೆಯಿತು.
